ಉಡುಪಿ ಜಿಲ್ಲೆಯಲ್ಲಿ ಇಂದು 13 ನಾಮಪತ್ರ ಸಲ್ಲಿಕೆ.
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಜಿಲ್ಲೆಯಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ.
118 ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ , ಭಾರತೀಯ ಜನತಾ ಪಾರ್ಟಿಯ ಗುರುರಾಜ ಶೆಟ್ಟಿ , ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಪ್ರಸಾದ್ ನಾಮಪತ್ರ ಸಲ್ಲಿಸಿರುತ್ತಾರೆ.
119 ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಕ್ಷದ ಅರುಣ್ ದೀಪಕ್ ಮೆಂಡೋನ್ಸಾ , ಭಾರತೀಯ ಜನತಾ ಪಾರ್ಟಿಯ ಕಿರಣ್ ಕುಮಾರ್ ಕೊಡ್ಗಿ ಅವರು 3 ನಾಮಪತ್ರ ಸಲ್ಲಿಸಿದ್ದಾರೆ.
120 ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಪ್ರಸಾದ ರಾಜ್ ಕಾಂಚನ್, ಪಕ್ಷೇತರ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಅಚಾರ್ಯ ನಾಮಪತ್ರ ಸಲ್ಲಿಸಿದ್ದಾರೆ. 121 ಕಾಪು ವಿಧಾನಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಾರ್ಟಿಯ ಗುರ್ಮೆ ಸುರೇಶ್ ಶೆಟ್ಟಿ 2 ನಾಮಪತ್ರಗಳನ್ನು ಹಾಗೂ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿಯಾಗಿ ಮೊಹಮದ್ ಹನೀಫ್ ಸೋಷಿಯಲ್ ನಾಮಪತ್ರ ಸಲ್ಲಿಸಿದ್ದಾರೆ.
122 ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ವಿದ್ಯಾಲಕ್ಷ್ಮಿ 2 ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ 3, ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ 6 , ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ 4, ಕಾಪು ವಿಧಾನ ಸಭಾ ಕ್ಷೇತ್ರಕ್ಕೆ 3, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ 4 ಸೇರಿದಂತೆ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನವಾಗಿದೆ.
Comments